ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

  ರಾಜ್ಯದಲ್ಲಿ ಸಿದ್ದರಾಮಯ್ಯ ಇನ್ನು 2 ವರ್ಷ ಬಜೆಟ್ ಮಂಡಿಸುತ್ತಾರೆ ! ಸಚಿವ ಜಮೀರ್ ಅಹ್ಮದ್ ಖಾನ್
ವರದಿಗಾರರು : Shobha jagadish | ಸ್ಥಳ : Bengaluru | ದಿನಾಂಕ : 24-03-2026

ರಾಜ್ಯದಲ್ಲಿ ಸಿದ್ದರಾಮಯ್ಯ ಇನ್ನು 2 ವರ್ಷ ಬಜೆಟ್ ಮಂಡಿಸುತ್ತಾರೆ ! ಸಚಿವ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ 2 ವರ್ಷ ಗಳ ಕಾಲ ರಾಜ್ಯದಲ್ಲಿ ಬಜೆಟ್ ಮಂಡನೆ ಮಾಡುತ್ತಾರೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ ತಿಳಿಸಿದ್ದಾರೆ 2026-27ನೇ ಸಾಲಿಗೆ ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಬಿಜೆಪಿ ಶಾಸಕ ವಿ.ಸುನೀಲ್‌ಕುಮಾರ್‌ ಅವರು, ಸಿದ್ದರಾಮಯ್ಯ ವಿತ್ತ ತಜ್ಞ ಅಷ್ಟೇ ಅಲ್ಲ. ಆರ್ಥಿಕ ತಜ್ಞ ಕೂಡ ಆಗಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಹೊಸ ಹೊಸ ಪದಗಳನ್ನು ಬಳಸಿದ್ದಾರೆ. ಅವುಗಳನ್ನು ನಮಗೆ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಹೇಳಿದರು. ಟ್ರೋಟಿಂಗ್‌ ಎಕನಾಮಿ, 11ಜಿ, ಫಲಧಾರೆ, ಭಿಷತತ್ವ, ಬೆಂಕಿಯನ್ನು ಬೆಳಕಾಗಿಸುವುದು ಸೇರಿದಂತೆ ಹಲವಾರು ಪದಗಳು ಬಳಕೆಯಾಗಿದೆ. ಇವುಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಮುಂದಿನ ಬಜೆಟ್‌ ವೇಳೆ ಶಬ್ದಕೋಶವನ್ನು ಕೊಟ್ಟುಬಿಡಿ ಎಂದು ವ್ಯಂಗ್ಯವಾಡಿದರು. ನಿಮ್ಮ ಕಚೇರಿಯ ಸಹಾಯದಿಂದ ಈ ಬಜೆಟ್ಟಿನಲ್ಲಿರುವ ಹೊಸ ಪದಗಳನ್ನು ಅರ್ಥಮಾಡಿಕೊಂಡಿದ್ದೇನೆ. ಮುಂದಿನ ಬಾರಿಯೂ ಸಿದ್ದರಾಮಯ್ಯ ಅವರೇ ಬಜೆಟ್‌ ಮಂಡಿಸಿದರೆ ಆಗ ಶಬ್ದಕೋಶ ಬೇಕಾಗಬಹುದು ಎಂದು ತಿಳಿಸಿದರು ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು, ಹೊಸ ಪದಗಳಿಗೆ ಸಚಿವ ಜಮೀರ್‌ ಅವರಿಂದ ಅರ್ಥ ಹೇಳಿಸಿ ಎಂದು ಹಾಸ್ಯ ಚಟಾಕಿ ಹಾರಿಸಿದರು. ಇದನ್ನು ಜಮೀರ್‌ ಕೇಳಿಸಿಕೊಂಡಿರಲಿಲ್ಲ. ತಮ ಹೆಸರು ಪ್ರಸ್ತಾಪವಾಗಿದ್ದಕ್ಕೆ ಏನು ಎಂದು ಅಶೋಕ ಅವರತ್ತ ಪ್ರಶ್ನಾರ್ಥಕವಾಗಿ ಕೇಳಿದರು. ಮಾತು ಬದಲಿಸಿದ ಅಶೋಕ್‌, ಮುಂದಿನ ಬಜೆಟನ್ನು ಸಿದ್ದರಾಮಯ್ಯ ಅವರೇ ಮಂಡಿಸುತ್ತಾರೆಯೇ ಎಂಬ ಪ್ರಶ್ನೆಯನ್ನು ಸುನೀಲ್‌ ಕುಮಾರ್‌ ಕೇಳುತ್ತಿದ್ದಾರೆ ಎಂದರು. ತಕ್ಷಣವೇ ಉತ್ತರಿಸಿದ ಸಚಿವ ಜಮೀರ್‌ ಅಹದ್‌ ಖಾನ್‌, ಮುಂದಿನ ಬಜೆಟ್‌ ಮಾತ್ರ ಅಲ್ಲ, ಇನ್ನು ಎರಡು ಬಜೆಟ್‌ಗಳನ್ನು ಸಿದ್ದರಾಮಯ್ಯ ಅವರೇ ಮಂಡಿಸುತ್ತಾರೆ ಎಂದು ಹೇಳಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+