ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಧಿಸಿದ ಜಿಲ್ಲೆ ಪ್ರವೇಶ ನಿಷೇಧಕ್ಕೆ ಬಸವನ ಬಾಗೇವಾಡಿಯಲ್ಲಿ ಪ್ರತಿಭಟನ
ವರದಿಗಾರರು : ಮೖಬೂಬ ಬಾಶಾ ಮನಗೂಳಿ, | ಸ್ಥಳ : ಬಸವನ ಬಾಗೇವಾಡಿ | ದಿನಾಂಕ : 02-12-2025

ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಧಿಸಿದ ಜಿಲ್ಲೆ ಪ್ರವೇಶ ನಿಷೇಧಕ್ಕೆ ಬಸವನ ಬಾಗೇವಾಡಿಯಲ್ಲಿ ಪ್ರತಿಭಟನ

ವಿಜಯಪುರ ಜಿಲ್ಲೆಯ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿಗೆ ಸರ್ಕಾರ ವಿಧಿಸಿರುವ ಜಿಲ್ಲೆ ಪ್ರವೇಶ ನಿಷೇಧ ಆದೇಶವನ್ನು ತೀವ್ರವಾಗಿ ಖಂಡಿಸಿ, ಅದನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಬಸವನ ಬಾಗೇವಾಡಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಮೆರವಣಿಗೆ ಬಸವ ಸ್ಮಾರಕದಿಂದ ಆರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗುತ್ತಾ ಬಸವೇಶ್ವರ ವೃತ್ತಕ್ಕೆ ತಲುಪಿತು. ಮೆರವಣಿಗೆಯಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಮತ್ತು ಸಂಘಟನೆಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ರಾಘವೇಂದ್ರ ಅಣ್ಣಿಗೇರಿ ಅವರು, “ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳು ನೈಸರ್ಗಿಕ ಕೃಷಿ, ಸೇವಾ ಚಟುವಟಿಕೆಗಳು ಹಾಗೂ ಗುರುಕುಲ ಶಿಕ್ಷಣ ಪದ್ಧತಿಗಳ ಮೂಲಕ ಸಮಾಜ ನಿರ್ಮಾಣಕ್ಕೆ ಮಹತ್ತರ ಕೊಡುಗೆ ನೀಡುತ್ತಿದ್ದಾರೆ. ಇಂತಹ ಸಂತರ ಮೇಲೆ ‘ದಂಗೆಗೆ ಕಾರಣರಾಗಬಹುದು’ ಎಂಬ ಸರ್ಕಾರದ ಆರೋಪ ಎಲ್ಲರನ್ನೂ ಅಚ್ಚರಿ ಗೊಳಿಸಿದೆ. ಸುಳ್ಳು ಆರೋಪ ಆಧರಿಸಿ ಪ್ರವೇಶ ನಿರ್ಬಂಧ ವಿಧಿಸಿರುವುದು ಅಸಹನೀಯ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವರು ಮುಂದುವರಿದು, “ಸರ್ಕಾರ ಸಮಾಜ ಕಟ್ಟುವ ಕೆಲಸ ಮಾಡಬೇಕೇ ಹೊರತು ಸಮಾಜ ಒಡೆಯುವ ಕೆಲಸ ಮಾಡಬಾರದು. ಈ ಆದೇಶ ಹಿಂಪಡೆಯದಿದ್ದರೆ ಬರುವ ದಿನಗಳಲ್ಲಿ ನಾವು ಗಟ್ಟಿಯಾದ ಹೋರಾಟ ನಡೆಸುವಂತೆ ಮಾಡುತ್ತದೆ,” ಎಂದು ಎಚ್ಚರಿಕೆ ನೀಡಿದರು.

ಹಲವು ಸಂಘಟನೆಗಳ ನಾಯಕರು ಸ್ವಾಮೀಜಿಗಳ ಪರವಾಗಿ ಮಾತನಾಡಿ ಸರ್ಕಾರದ ಕ್ರಮವನ್ನು ಖಂಡಿಸಿದರು. ನಂತರ, ಜಿಲ್ಲೆ ಪ್ರವೇಶ ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಗ್ರೇಡ್–2 ತಹಶೀಲ್ದಾರ್ ಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದವರು: ಪೂಜ್ಯ ಗಿರಿಶಾನಂದ ಸ್ವಾಮೀಜಿ, ರಾಘವೇಂದ್ರ ಅಣ್ಣಿಗೇರಿ, ಶಿವಪುತ್ರ ಸ್ವಾಮಿಗಳು, ಮಂಜುಳಾ ಮಾತಾಜಿ, ಅಶೋಕ ಹಾರಿವಾಳ, ಕಲ್ಲು ಸೊನ್ನದ್, ಪರಶುರಾಮ್ ಅಡಗಿಮಣಿ, ಬಸಲಿಂಗ ನಂದಿ, ಬಸವರಾಜ್ ಗಚ್ಚಿನಮಠ, ವಿನುತ ಕಲ್ಲೂರು, ಮಣಿಕಂಠ ಕಲ್ಲೂರು ಸೇರಿದಂತೆ ಊರಿನ ಅನೇಕ ಮುಖಂಡರು ಮತ್ತು ಭಕ್ತರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+