ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಧಿಸಿದ ಜಿಲ್ಲೆ ಪ್ರವೇಶ ನಿಷೇಧಕ್ಕೆ ಬಸವನ ಬಾಗೇವಾಡಿಯಲ್ಲಿ ಪ್ರತಿಭಟನ
ವರದಿಗಾರರು : ಮೖಬೂಬ ಬಾಶಾ ಮನಗೂಳಿ, | ಸ್ಥಳ : ಬಸವನ ಬಾಗೇವಾಡಿ | ದಿನಾಂಕ : 02-12-2025

ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಧಿಸಿದ ಜಿಲ್ಲೆ ಪ್ರವೇಶ ನಿಷೇಧಕ್ಕೆ ಬಸವನ ಬಾಗೇವಾಡಿಯಲ್ಲಿ ಪ್ರತಿಭಟನ

ವಿಜಯಪುರ ಜಿಲ್ಲೆಯ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿಗೆ ಸರ್ಕಾರ ವಿಧಿಸಿರುವ ಜಿಲ್ಲೆ ಪ್ರವೇಶ ನಿಷೇಧ ಆದೇಶವನ್ನು ತೀವ್ರವಾಗಿ ಖಂಡಿಸಿ, ಅದನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಬಸವನ ಬಾಗೇವಾಡಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಮೆರವಣಿಗೆ ಬಸವ ಸ್ಮಾರಕದಿಂದ ಆರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗುತ್ತಾ ಬಸವೇಶ್ವರ ವೃತ್ತಕ್ಕೆ ತಲುಪಿತು. ಮೆರವಣಿಗೆಯಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಮತ್ತು ಸಂಘಟನೆಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ರಾಘವೇಂದ್ರ ಅಣ್ಣಿಗೇರಿ ಅವರು, “ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳು ನೈಸರ್ಗಿಕ ಕೃಷಿ, ಸೇವಾ ಚಟುವಟಿಕೆಗಳು ಹಾಗೂ ಗುರುಕುಲ ಶಿಕ್ಷಣ ಪದ್ಧತಿಗಳ ಮೂಲಕ ಸಮಾಜ ನಿರ್ಮಾಣಕ್ಕೆ ಮಹತ್ತರ ಕೊಡುಗೆ ನೀಡುತ್ತಿದ್ದಾರೆ. ಇಂತಹ ಸಂತರ ಮೇಲೆ ‘ದಂಗೆಗೆ ಕಾರಣರಾಗಬಹುದು’ ಎಂಬ ಸರ್ಕಾರದ ಆರೋಪ ಎಲ್ಲರನ್ನೂ ಅಚ್ಚರಿ ಗೊಳಿಸಿದೆ. ಸುಳ್ಳು ಆರೋಪ ಆಧರಿಸಿ ಪ್ರವೇಶ ನಿರ್ಬಂಧ ವಿಧಿಸಿರುವುದು ಅಸಹನೀಯ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವರು ಮುಂದುವರಿದು, “ಸರ್ಕಾರ ಸಮಾಜ ಕಟ್ಟುವ ಕೆಲಸ ಮಾಡಬೇಕೇ ಹೊರತು ಸಮಾಜ ಒಡೆಯುವ ಕೆಲಸ ಮಾಡಬಾರದು. ಈ ಆದೇಶ ಹಿಂಪಡೆಯದಿದ್ದರೆ ಬರುವ ದಿನಗಳಲ್ಲಿ ನಾವು ಗಟ್ಟಿಯಾದ ಹೋರಾಟ ನಡೆಸುವಂತೆ ಮಾಡುತ್ತದೆ,” ಎಂದು ಎಚ್ಚರಿಕೆ ನೀಡಿದರು.

ಹಲವು ಸಂಘಟನೆಗಳ ನಾಯಕರು ಸ್ವಾಮೀಜಿಗಳ ಪರವಾಗಿ ಮಾತನಾಡಿ ಸರ್ಕಾರದ ಕ್ರಮವನ್ನು ಖಂಡಿಸಿದರು. ನಂತರ, ಜಿಲ್ಲೆ ಪ್ರವೇಶ ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಗ್ರೇಡ್–2 ತಹಶೀಲ್ದಾರ್ ಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದವರು: ಪೂಜ್ಯ ಗಿರಿಶಾನಂದ ಸ್ವಾಮೀಜಿ, ರಾಘವೇಂದ್ರ ಅಣ್ಣಿಗೇರಿ, ಶಿವಪುತ್ರ ಸ್ವಾಮಿಗಳು, ಮಂಜುಳಾ ಮಾತಾಜಿ, ಅಶೋಕ ಹಾರಿವಾಳ, ಕಲ್ಲು ಸೊನ್ನದ್, ಪರಶುರಾಮ್ ಅಡಗಿಮಣಿ, ಬಸಲಿಂಗ ನಂದಿ, ಬಸವರಾಜ್ ಗಚ್ಚಿನಮಠ, ವಿನುತ ಕಲ್ಲೂರು, ಮಣಿಕಂಠ ಕಲ್ಲೂರು ಸೇರಿದಂತೆ ಊರಿನ ಅನೇಕ ಮುಖಂಡರು ಮತ್ತು ಭಕ್ತರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+