ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭೂ ಕೈಲಾಸವಾಗಿ ಅರಳಿದ ಪುಷ್ಪಗಿರಿ—ಭಕ್ತ, ಮಠ ಮತ್ತು ರಾಜ್ಯದ ಸಹಕಾರಕ್ಕೆ ಶ್ಲಾಘನೆ
ವರದಿಗಾರರು : ಕೆ ಜಿ ಸುರೇಶ್ | ಸ್ಥಳ : ಹಾಸನ | ದಿನಾಂಕ : 21-11-2025

ಭೂ ಕೈಲಾಸವಾಗಿ ಅರಳಿದ ಪುಷ್ಪಗಿರಿ—ಭಕ್ತ, ಮಠ ಮತ್ತು ರಾಜ್ಯದ ಸಹಕಾರಕ್ಕೆ ಶ್ಲಾಘನೆ

ಹಳೇಬೀಡು: ಶ್ರೀ ಕ್ಷೇತ್ರ ಪುಷ್ಪಗಿರಿಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಭಕ್ತರು ಮತ್ತು ಸಾರ್ವಜನಿಕರಲ್ಲಿ ಹೊಸ ಚೈತನ್ಯವನ್ನು ಮೂಡಿಸಿವೆ. ಕಾರ್ತಿಕೋತ್ಸವದ ಅಂಗವಾಗಿ ಗುರುವಾರ ರಾತ್ರಿ ಪುಷ್ಪಗಿರಿ ಮಠದಲ್ಲಿ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕ್ಷೇತ್ರದ ಪರಿವರ್ತನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಭಕ್ತರ ಸಹಕಾರವೇ ಪ್ರಮುಖ ಎಂದು ಹೇಳಿದರು. ಯಡಿಯೂರಪ್ಪ ಅವರು ಟೀಕೆಗಳನ್ನು ಪರಿಗಣಿಸದೆ ಸಮಾಜಮುಖಿ ಕಾರ್ಯಗಳಿಗೆ ಸದಾ ನೆರವಾಗಿದ್ದು, ಮಠ ಮಾನ್ಯರಿಗೆ ನೀಡಿದ ಅನುದಾನದಿಂದ ಪುಷ್ಪಗಿರಿಯಲ್ಲಿ ಮಹತ್ವದ ಬದಲಾವಣೆ ಸಾಧ್ಯವಾಗಿದೆ ಎಂದು ಅವರು ಹೇಳಿದರು. ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೂಲಕ ಹಲವು ಕುಟುಂಬಗಳನ್ನು ಮುನ್ನಡೆಸುತ್ತಿರುವುದು ಶ್ಲಾಘನೀಯ ಎಂದು ಪ್ರಶಂಸಿಸಿದರು.

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರ ನೀಡುವುದು ಪೋಷಕರ ಕರ್ತವ್ಯವಾಗಿದ್ದು, ಯುವಶಕ್ತಿಯನ್ನು ದುಶ್ಚಟಗಳಿಂದ ದೂರ ಇಡುವ ಜವಾಬ್ದಾರಿ ಸಮಾಜದದ್ದೇ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು. “ಯಡಿಯೂರಪ್ಪರಂತೆ ನಾನೂ ಸವಾಲುಗಳನ್ನು ಎದುರಿಸಿ ಜನಸೇವೆ ಮಾಡುವೆ,” ಎಂದು ಹೇಳಿದರು. ಸ್ಥಳೀಯ ಶಾಸಕ ಎಚ್‌.ಕೆ. ಸುರೇಶ್ ಮಾತನಾಡಿ, ಸ್ವಾಮೀಜಿಯವರ ಪರಿಶ್ರಮದಿಂದ ಪುಷ್ಪಗಿರಿ ಇಂದಿಗೆ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಸಿದ್ದರಾಮಪ್ಪ, ಡಿವೈಎಸ್‌ಪಿ ಎಚ್‌.ಜಿ. ಮಂಜುನಾಥ್, ಉದ್ಯಮಿ ಕೊರಟಗೆರೆ ಪ್ರಕಾಶ್, ಬಿ.ಸಿ. ತುಕಾರಾಂರಾವ್, ವಸಂತ ಶೇಖರ್ ಮತ್ತು ಕಾಫಿ ಬೆಳೆಗಾರ ದಿವಾಕರ ಅವರಿಗೆ ಸಮಾಜ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೀಪಗಳ ಹೊಳಪಿನಲ್ಲಿ ಪುಷ್ಪಗಿರಿ ಮೆರಗು ೧೦೮ ಲಿಂಗ ಮಂದಿರ, ಗುರು ಕರಿಬಸವೇಶ್ವರ ಮಂದಿರ, ಆದಿಯೋಗಿ ಶಿವನ ವಿಗ್ರಹ ಹಾಗೂ ಮಠದ ಸಮಗ್ರ ಆವರಣವು ದೀಪಗಳಿಂದ ಕಂಗೊಳಿಸಿತು. ಸಾವಿರಾರು ಭಕ್ತರು ಭಾಗವಹಿಸಿ ದೀಪ ಬೆಳಗಿಸಿ ಭಕ್ತಿ ಸಮರ್ಪಿಸಿದರು. ಸ್ವಾಮೀಜಿಯವರ ನೇತೃತ್ವದಲ್ಲಿ ಶತ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾ ಮಂಗಳಾರತಿ ಮತ್ತು ಗಂಗಾರತಿ ನೆರವೇರಿಸಲಾಯಿತು. ಸಾಮೂಹಿಕ ಸಹಕಾರವೇ ಅಭಿವೃದ್ಧಿಯ ಶಕ್ತಿ “ಪುಷ್ಪಗಿರಿಯ ಅಭಿವೃದ್ಧಿಯಲ್ಲಿ ಯಡಿಯೂರಪ್ಪರ ಪಾತ್ರ ಮಹತ್ವದ್ದು; ವಿಜಯೇಂದ್ರರಿಗೂ ಕ್ಷೇತ್ರದ ಗೌರವ ಅಪಾರ. ಭಕ್ತರು ಮತ್ತು ಎಲ್ಲಾ ಸಮುದಾಯದವರ ಸಹಕಾರದಿಂದ ಪುಷ್ಪಗಿರಿ ಭೂ ಕೈಲಾಸದಂತಾಗಿದೆ. ಮುಂದಿನ ಅಭಿವೃದ್ಧಿಗಾಗಿ ಸಹಕಾರ ಅಗತ್ಯ,” ಎಂದು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+