ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

"ತೆರಿಗೆ ಸಂಗ್ರಹಣೆಗೆ ಹುಣಸಗಿಯಲ್ಲಿ ವಿಶೇಷ ಜಾಗೃತಿ–ಸಮೀಕ್ಷಾ ಅಭಿಯಾನ"
ವರದಿಗಾರರು : ಶಿವು ರಾಠೋಡ | ಸ್ಥಳ : ಹುಣಸಗಿ | ದಿನಾಂಕ : 28-11-2025

"ತೆರಿಗೆ ಸಂಗ್ರಹಣೆಗೆ ಹುಣಸಗಿಯಲ್ಲಿ ವಿಶೇಷ ಜಾಗೃತಿ–ಸಮೀಕ್ಷಾ ಅಭಿಯಾನ"

ಹುಣಸಗಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ “ತೆರಿಗೆ ವಸೂಲಾತಿ ವಿಶೇಷ ಅಭಿಯಾನ” ಜಾರಿಗೊಳಿಸುವ ಉದ್ದೇಶದಿಂದ ತಾ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ನಾಯಕ ಅವರಿoದ ಗ್ರಾಮಗಳಿಗೆ ಭೇಟಿ ನೀಡಲಾಯಿತು. ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು ವಿಕೇಂದ್ರೀಕೃತ ವ್ಯವಸ್ಥೆಯ ಸಶಕ್ತ ಕೇಂದ್ರಗಳಾಗಿ ಕೆಲಸ ಮಾಡಲು ಆರ್ಥಿಕ ಸಬಲೀಕರಣ ಅತ್ಯವಶ್ಯಕ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ನಿಯಮ 1993ರ ಧಾರಾ 200(7) ಅನ್ವಯ ಗ್ರಾಮ ಪಂಚಾಯಿತಿಗಳು ಶೇ.100 ರಷ್ಟು ತೆರಿಗೆ ವಸೂಲಿ ಮಾಡುವ ಹೊಣೆಗಾರಿಕೆ ಹೊಂದಿವೆ. ಈ ಹಿನ್ನೆಲೆಯಲ್ಲಿ, ಪ್ರತಿಯೊಂದು ಗ್ರಾಮ ಪಂಚಾಯಿತಿಯೂ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ತೆರಿಗೆ ವಸೂಲಾತಿಯನ್ನು ವಿಶೇಷ ಅಭಿಯಾನವಾಗಿ ಮುಂದೂಡಬೇಕು ಎಂದು ಸೂಚಿಸಲಾಗಿದೆ.

ಹುಣಸಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ವಸೂಲಾತಿ ತಂಡಗಳನ್ನು ರಚಿಸಿ ಕಡ್ಡಾಯವಾಗಿ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಬಸಣ್ಣ ನಾಯಕ ನಿರ್ದೇಶನ ನೀಡಿದ್ದಾರೆ. ತಾಲೂಕಿನಲ್ಲಿ ಕುಂಠಿತಗೊಂಡಿದ್ದ ಕಂದಾಯ ವಸೂಲಾತಿ ಪ್ರಗತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಕೂಡಲೇ ವಿಶೇಷ ಅಭಿಯಾನ ಕೈಗೊಳ್ಳಬೇಕು , ಪ್ರಗತಿ ಸಾಧಿಸಲು ವಿಫಲವಾದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಜಿ.ಪಂ. ಸಿಇಒ ಅವರ ಆದೇಶದಂತೆ ತೆರಿಗೆ ವಸೂಲಾತಿ ಅಭಿಯಾನ ಪ್ರಾರಂಭವಾಗಿದ್ದು, ಈ ಸಂದರ್ಭದಲ್ಲಿ ಬಸಣ್ಣ ನಾಯಕ ಅವರು ಮುದನೂರ, ಕನ್ನಳ್ಳಿ, ಹೆಬ್ಬಾಳ ಹಾಗೂ ರಾಜನಕೊಳೂರ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಭಿಯಾನದ ಪ್ರಗತಿ ಪರಿಶೀಲಿಸಿದರು. ಮನೆಮನೆಗೂ, ಅಂಗಡಿ–ಮುಗಟ್ಟುಗಳಿಗೂ ಭೇಟಿ ನೀಡಿ ಸಾರ್ವಜನಿಕರಿಗೆ ತೆರಿಗೆ ಪಾವತಿ ಬಗ್ಗೆ ಜಾಗೃತಿ ಮೂಡಿಸಿದರು. ಪಂಚಾಯತ್ ಸಿಬ್ಬಂದಿಗೆ ಹೆಚ್ಚಿನ ತೆರಿಗೆ ಸಂಗ್ರಹಣೆ ಮಾಡುವಂತೆ ಸೂಚನೆ ನೀಡಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+