ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅಂಧತೆಯಿಂದ ಚಾಮ್ಪಿಯನ್‌ವರೆಗೆ: ಮೈಲಾರಿ ವಗ್ಗರ್ ಸಾಧನೆ
ವರದಿಗಾರರು : ಅಜಯ್ ಚೌಧರಿ | ಸ್ಥಳ : ರಾಯಚೂರು. | ದಿನಾಂಕ : 28-11-2025

ಅಂಧತೆಯಿಂದ ಚಾಮ್ಪಿಯನ್‌ವರೆಗೆ: ಮೈಲಾರಿ ವಗ್ಗರ್ ಸಾಧನೆ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಗೊಡಚಿ ಗ್ರಾಮದ ಮೈಲಾರಿ ವಗ್ಗರ್, ಹುಟ್ಟಿನಿಂದಲೇ ಅಂಧನಾಗಿದ್ದರೂ, ಯೋಗ ಮತ್ತು ಮಲ್ಲಕಂಬದಲ್ಲಿ ಅತ್ಯುತ್ತಮ ಸಾಧನೆ ತೋರಿಸುತ್ತಿದ್ದಾರೆ. ಮೈಲಾರಿ 9ನೇ ತರಗತಿಯಲ್ಲಿ ಓದುತ್ತಿದ್ದಾರೆ. ಅವರು ತಮ್ಮ ಬಾಲ್ಯದಲ್ಲಿ ತಂದೆ ವಿಠಲ್ ಮತ್ತು ತಾಯಿ ರುಕ್ಮವ್ವ ಅವರನ್ನು ಕಳೆದುಕೊಂಡಿದ್ದಾರೆ. ಮಹತ್ವಪೂರ್ಣ ತಿರುವು ಆಗಿದ್ದು, 9ನೇ ವಯಸ್ಸಿನಲ್ಲಿ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹೊಳೆಆಲೂರಿನ ಜ್ಞಾನ ಸಿಂಧು ಅಂಧ ಮಕ್ಕಳ ವಸತಿ ಶಾಲೆಗೆ ಮೂರನೇ ತರಗತಿಯಲ್ಲಿ ಸೇರಿದಾಗ. ಶಾಲೆಯಲ್ಲಿ ಯೋಗ ಮತ್ತು ಮಲ್ಲಕಂಬವನ್ನು ಕಲಿತ ಮೈಲಾರಿ, 2023 ರ ಮೈಸೂರು ದಸರಾ ಯೋಗ ಸ್ಪರ್ಧೆಯಲ್ಲಿ 10 ವರ್ಷದ ಒಳಗಿನವರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಮುಂದಿನ ವರ್ಷ, 2025 ಸೆಪ್ಟೆಂಬರ್ 13ರಂದು ರಾಜ್ಯಮಟ್ಟದ ಪ್ಯಾರಾ ಒಲಂಪಿಕ್ ನಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ತಂದುಕೊಟ್ಟಿದ್ದಾರೆ. ನಂತರ, ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಯೋಗ ಒಲಂಪಿಯನ್ ನಲ್ಲಿ ಪಾಲ್ಗೊಂಡಿದ್ದಾರೆ. ಮೈಲಾರಿ ವಿವಿಧ ಉತ್ಸವಗಳಲ್ಲಿ ಸಹ ಯಶಸ್ವಿಯಾಗಿ ಭಾಗವಹಿಸಿದ್ದಾರೆ: 2024 & 2025 ಜಿಲ್ಲಾ ಮಟ್ಟದ ಊಟದ ಸ್ಪರ್ಧೆ – ಪ್ರಥಮ ಸ್ಥಾನ ಜಿಲ್ಲಾ ಮಟ್ಟದ ಬಾಲಭವನ ನಾಟ್ ಯೋಗ – ಪ್ರಥಮ ಸ್ಥಾನ, ನಂತರ ರಾಜ್ಯಮಟ್ಟಕ್ಕೆ ಆಯ್ಕೆ 2025 ನವೆಂಬರ್ 18ರಂದು ಬೆಂಗಳೂರು ಬಾಲಭವನ ಆವರಣದಲ್ಲಿ ನಡೆದ ರಾಜ್ಯಮಟ್ಟದ ಕಲಾ ಶ್ರೀ ಪ್ರಶಸ್ತಿ – ಕಣ್ಣಿದ್ದವರೊಂದಿಗೆ ಸ್ಪರ್ಧೆ ಮಾಡಿ ಪ್ರಶಸ್ತಿ ಪಡೆದಿದ್ದಾರೆ ಮೈಲಾರಿ ಯೋಗ ಮತ್ತು ಮಲ್ಲಕಂಬವನ್ನು ತಮ್ಮ “ಪಂಚಪ್ರಾಣ”ವೆಂದು ಪರಿಗಣಿಸುತ್ತಾರೆ. ಅವರು ಅಂತರಾಷ್ಟ್ರೀಯ, ರಾಷ್ಟ್ರಮಟ್ಟದ ಯೋಗ ಸಮ್ಮೇಳನಗಳು ಮತ್ತು ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿದ್ದು, 2023 ರ ರಾಷ್ಟ್ರಮಟ್ಟದ ಕಲಾ ಶ್ರೀ ಸಮಾರಂಭದಲ್ಲಿ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದರು. ಅವನ ಈ ಅಮೋಘ ಸಾಧನೆಯನ್ನು ಕರ್ನಾಟಕ ಸರ್ಕಾರದ ಬಾಲಭವನದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 28 ರಂದು ಕಲಾ ಶ್ರೀ ಪ್ರಶಸ್ತಿಯಿಂದ ಗೌರವಿಸಲಿದ್ದಾರೆ. ಜ್ಞಾನ ಸಿಂಧು ಶಾಲೆಯ ಆಡಳಿತ ಮಂಡಳಿ ಮತ್ತು ಗ್ರಾಮೀಯ ಗುರುಗಳು ಮೈಲಾರಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1064+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1242+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1263+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1342+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3821+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4302+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4340+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9535+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9657+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9934+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9955+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23923+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26961+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26981+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27010+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30014+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30019+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30141+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30236+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30268+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+