ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೀದರ್: ಬೀಜ ಮಸೂದೆ 2025 ಮತ್ತು ಕಾರ್ಮಿಕ ಸಂಹಿತೆ ವಿರೋಧಿ ಭಾರೀ ಪ್ರತಿಭಟನೆ
ವರದಿಗಾರರು : ಬಸವರಾಜ ಪೂಜಾರಿ | ಸ್ಥಳ : ಬೀದರ | ದಿನಾಂಕ : 27-11-2025

ಬೀದರ್: ಬೀಜ ಮಸೂದೆ 2025 ಮತ್ತು ಕಾರ್ಮಿಕ ಸಂಹಿತೆ ವಿರೋಧಿ ಭಾರೀ ಪ್ರತಿಭಟನೆ

ಬೀದರ್: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಬೀಜ ಮಸೂದೆ 2025 ಮತ್ತು ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ–ಕಾರ್ಮಿಕ ಸಂಘಟನೆಗಳು ಬುಧವಾರ ಬೀದರ್‌ನಲ್ಲಿ ಭಾರೀ ಪ್ರತಿಭಟನೆ ನಡೆಸಿದವು. ಈ ಪ್ರತಿಭಟನೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಹಲವಾರು ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ರಾಷ್ಟ್ರಪತಿ ಹಾಗೂ ಕರ್ನಾಟಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಸಂಘಟನೆಗಳು, ಬೀಜ ಮಸೂದೆ 2025 ಪಾರಂಪರಿಕ ಬೀಜ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದು, ರೈತರನ್ನು ಕಾರ್ಪೋರೇಟ್ ಬೀಜ ಕಂಪನಿಗಳ ಮೇಲೆ ಅವಲಂಬಿತ ಮಾಡುತ್ತದೆ ಎಂದು ಆಕ್ಷೇಪಿಸಿದರು.

ಸಂಘಟನೆಗಳು ಹೊಸ ಆರ್ಥಿಕ ನೀತಿ ಹಾಗೂ ಒಪ್ಪಂದಗಳ ಪರಿಣಾಮವಾಗಿ ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಬಿಕ್ಕಟ್ಟಿಗೆ ಸಿಲುಕಿರುವುದನ್ನು ಗಮನಕ್ಕೆ ತಂದರು. ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕ ವಿರೋಧಿ ಮತ್ತು ಕಂಪನಿ ಮಾಲೀಕರ ಪರವಾಗಿದ್ದು, ಹಿಂದಿನ 29 ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಿರುವುದು ತೀವ್ರ ವಿರೋಧಕ್ಕಿಳಿಯಿತು. ಸಭೆಯಲ್ಲಿ, ಕೃಷಿ ವಲಯದ ಬಿಕ್ಕಟ್ಟಿನಿಂದ ದೇಶದಲ್ಲಿ ಐದು ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಉಲ್ಲೇಖಿಸಲಾಯಿತು. ಸಂಘಟನೆಗಳ ಪ್ರಮುಖ ಹಕ್ಕೋತ್ತಾಯಗಳಂತೆ, ಬೀಜ ಮಸೂದೆ 2025 ಅನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಲಾಯಿತು. ಜೊತೆಗೆ, ಕಾರ್ಮಿಕ ವೇತನ ಸಂಹಿತೆ, ಕೈಗಾರಿಕಾ ಸಂಬಂಧ ಸಂಹಿತೆ, ಸಾಮಾಜಿಕ ಭದ್ರತೆ ಸಂಹಿತೆ ಹಾಗೂ ವೃತ್ತಿಪರ ಸುರಕ್ಷತೆ ಸಂಹಿತೆಗಳನ್ನು ರದ್ದುಪಡಿಸಿ ಹಿಂದಿನ 29 ಕಾರ್ಮಿಕ ಕಾಯ್ದೆಗಳನ್ನು ಮರು ಜಾರಿಗೆ ತರಬೇಕೆಂದು ಕೋರಲಾಗಿತ್ತು

ಪ್ರತಿಭಟನೆಯಲ್ಲಿ ಭಾಗವಹಿಸಿದ ಪ್ರಮುಖ ನಾಯಕರು: ಬಾಬುರಾವ್ ಹೊನ್ನಾ, ಮಲ್ಲಿಕಾರ್ಜುನ ಸ್ವಾಮಿ, ನಜೀರ್ ಅಹ್ಮದ್, ಎಂ.ಡಿ. ಖಮರ್ ಪಟೇಲ್, ಶೇಖ್ ನವಾಜ್, ಜೈಶೀಲಕುಮಾರ, ವೀರಶೆಟ್ಟಿ ವಟಂಬೆ, ರಾಮಣ್ಣ ಅಲಮಾಸಪೂರ, ಪ್ರಭು ತಗಣಿಕರ್, ಶ್ರೀಮತಿ ಶೀಲಾ ಸಾಗರ, ಚಾಂದೋಬಾ ಭೋಸ್ಲೆ, ಖದೀರಮಿಯ್ಯಾ, ಶಿವಾಜಿ ಮುಲಾರಿ, ಬಸವರಾಜ ಪಾಟೀಲ್ ಸೇರಿದಂತೆ ಅನೇಕ ರೈತ–ಕಾರ್ಮಿಕ ಸಂಘಟನೆಗಳ ನಾಯಕರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+