ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಗುರುಮಠಕಲ್‌ನಲ್ಲಿ ₹26.60 ಕೋಟಿ ಸೋಲಾರ್ ಹೈಮಾಸ್ಟ್ ಹಗರಣ ಆರೋಪ — K.R.S ಪಕ್ಷದ ವಿನೂತನ ಪ್ರತಿಭಟನೆ
ವರದಿಗಾರರು : ಫಯಾಜ್ ತೇಲಿ | ಸ್ಥಳ : ಬಾಗಲಕೋಟೆ | ದಿನಾಂಕ : 29-11-2025

ಗುರುಮಠಕಲ್‌ನಲ್ಲಿ ₹26.60 ಕೋಟಿ ಸೋಲಾರ್ ಹೈಮಾಸ್ಟ್ ಹಗರಣ ಆರೋಪ — K.R.S ಪಕ್ಷದ ವಿನೂತನ ಪ್ರತಿಭಟನೆ

ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ 2024–25ನೇ ಸಾಲಿನ ಕೆ.ಕೆ.ಆರ್.ಡಿ.ಬಿ. (KKRDB) ಮೈಕ್ರೋ ಮತ್ತು ಸಾಮಾನ್ಯ ಯೋಜನೆ ಅಡಿ ಅಳವಡಿಸಲಾದ 226 ಸೋಲಾರ್ ಹೈಮಾಸ್ಟ್ ಕಂಬಗಳ ನಿರ್ಮಾಣ ಕಾಮಗಾರಿಯಲ್ಲಿ ಭಾರೀ ಮಟ್ಟದ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (K.R.S.) ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ. ಒಟ್ಟು ₹26 ಕೋಟಿ 60 ಲಕ್ಷ ವೆಚ್ಚದ ಈ ಯೋಜನೆಯಲ್ಲಿ ಪ್ರತಿ ಹೈಮಾಸ್ಟ್‌ಗೆ ₹10 ಲಕ್ಷ ಎಂದು ಅಂದಾಜಿಸಲಾಗಿದೆಯಾದರೂ, ನೆಲಮಟ್ಟದಲ್ಲಿ ಆಗಿರುವ ಕಾಮಗಾರಿ ಈ ಮೊತ್ತಕ್ಕೆ ಹೊಂದಿಕೆಯಾಗುವುದಿಲ್ಲವೆಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಕಾಮಗಾರಿಯಲ್ಲಿ ಹೊರಬಿದ್ದ ಅವ್ಯವಹಾರಗಳು ಅನೇಕ ಕಡೆ ನಾಮಫಲಕಗಳಲ್ಲಿ ಅಂದಾಜು ಮೊತ್ತ ಹಾಗೂ ಏಜೆನ್ಸಿ ಹೆಸರು ಉಲ್ಲೇಖಿಸದೇ ಬಿಟ್ಟಿದ್ದಾರೆ. ಸೈದಾಪೂರ ಬಸ್ ನಿಲ್ದಾಣದಲ್ಲಿ ಮಾತ್ರ ₹10 ಲಕ್ಷ ವೆಚ್ಚವೆಂದು ಪೆನ್‌ನಿಂದ ಬರೆದಿರುವುದು, ಯೋಜನೆಯ ಪ್ರಾಮಾಣಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕೆಲವು ಸ್ಥಳಗಳಲ್ಲಿ ನಾಮಫಲಕಗಳನ್ನು ಹರಿದು ಹಾಕಿರುವುದು ಸಂಶಯಾಸ್ಪದವಾಗಿದೆ. ಸ್ಥಳ ಪರಿಶೀಲನೆ ನಡೆಸಿದಾಗ ₹10 ಲಕ್ಷ ಮೌಲ್ಯದ ಕಾಮಗಾರಿ ಆಗಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿರುವ ಗ್ರಾಮಗಳನ್ನು ಕಡೆಗಣಿಸಿ, ಹಣ ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಎಸ್ಸೈಟಿ ತನಿಖೆಗಾಗಿ ಮನವಿ ಪ್ರತಿಭಟನಾಕಾರರು ಯಾದಗಿರಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದು, ಅಂದಾಜು ಪತ್ರಿಕೆ, ಬಿಲ್ ತಯಾರಿಸಿದ ಅಧಿಕಾರಿಗಳ ವಿರುದ್ಧ ಎಸ್‌.ಐ.ಟಿ. ಮೂಲಕ ಉನ್ನತ ಮಟ್ಟದ ತನಿಖೆ ನಡೆಸಬೇಕು, ನಿಧಿಯನ್ನು ದುರ್ಬಳಕೆ ಮಾಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು, ಗುಣಮಟ್ಟದಂತೆ ಕೆಲಸ ಮಾಡದೇ ಇರುವ ಹೈಮಾಸ್ಟ್‌ಗಳನ್ನು ಮರುಗೌಣಮಟ್ಟದಿಂದ, ನಿಜವಾದ ₹10 ಲಕ್ಷ ವೆಚ್ಚದಲ್ಲೇ ಪುನಃ ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದವರು ಈ ಪ್ರತಿಭಟನೆಯನ್ನು ಎಸ್. ನಿಜಲಿಂಗಪ್ಪ ಪೂಜಾರಿ (ಜಿಲ್ಲಾ ಪ್ರಧಾನ ಕಾರ್ಯದರ್ಶಿ), ಗುರುಮಠಕಲ್ ಪರಾಜಿತ MLA ಅಭ್ಯರ್ಥಿ, ಜಗನಾಥ್ ಎಸ್. ಚಿಂತನಹಳ್ಳಿ (ಜಿಲ್ಲಾಧ್ಯಕ್ಷರು), ವೀರೇಶ್ ಸಜ್ಜನ್ (ಜಯ ಕರ್ನಾಟಕ ರಕ್ಷಣಾ ಸೇನೆ ಅಧ್ಯಕ್ಷರು) ಮುಖ್ಯವಾಗಿ ನೇತೃತ್ವ ವಹಿಸಿದ್ದರು. ಇದೆಂತೆ ಆಂಜನೇಯ ಕಟ್ಟಿಮನಿ, ವಿಜಯ್ ಕಂದಳ್ಳಿ, ಜಯವಂತ ದಳಪತಿ, ಅನುರಾಧ ನಾಗರಬಂಡ, ಕಥಲ್ ಸಾಬ್, ಚಾಂದ್ ಪಾಶ ಯಲ್ಲಪ, ಶಿವರಾಜ್ ರಟ್ನಾಡಗಿ, ಸಿದ್ದು ನಾಯಕ್, ಶಾಂತರಾಜ್ ಯಲಸತಿ, ಶ್ರೀಶೈಲ ಬಾಗಿಲಿ, ಮಣಿಕಂಠ ನಾಟಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+