ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೊರಟಗೆರೆ: ವಿದ್ಯಾರ್ಥಿ ಜೀವನದ ಅತ್ಯುತ್ತಮ ಪಾಠ ಎನ್ಎಸ್ಎಸ್ ಶಿಬಿರ — ರಕ್ಷಿತಾ ವೀರಕ್ಯಾತರಾಯ
ವರದಿಗಾರರು : ಮುತ್ತುರಾಜ್ | ಸ್ಥಳ : ಕೊರಟಗೆರೆ | ದಿನಾಂಕ : 25-11-2025

ಕೊರಟಗೆರೆ: ವಿದ್ಯಾರ್ಥಿ ಜೀವನದ ಅತ್ಯುತ್ತಮ ಪಾಠ ಎನ್ಎಸ್ಎಸ್ ಶಿಬಿರ — ರಕ್ಷಿತಾ ವೀರಕ್ಯಾತರಾಯ

ಕೊರಟಗೆರೆ: “ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಒಮ್ಮೆ ಎನ್ಎಸ್ಎಸ್ ಶಿಬಿರಕ್ಕೆ ಹಾಜರಾಗಲೇಬೇಕು. ಇದು ಪಠ್ಯ ಪುಸ್ತಕದ ಜ್ಞಾನಕ್ಕಿಂತಲೂ ಜೀವನ ಮೌಲ್ಯಗಳನ್ನು ಕಲಿಸುವ ಅನನ್ಯ ಪಾಠಶಾಲೆ ಎಂದು ವಡ್ಡಗೆರೆ ಗ್ರಾ.ಪಂ ಅಧ್ಯಕ್ಷೆ ರಕ್ಷಿತಾ ವೀರಕ್ಯಾತರಾಯ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ವತಿಯಿಂದ ವಡ್ಡಗೆರೆ ಗ್ರಾಮದಲ್ಲಿ ಆಯೋಜಿಸಲಾದ 7 ದಿನಗಳ ಎನ್ಎಸ್ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು

ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮತ್ತು ಸಮಾಜ ಪರಿವರ್ತನೆಗೆ ಪಣತೊಟ್ಟು ಮುಂದಾಗಬೇಕೆಂದು ಕರೆ ನೀಡಿದರು. ಶಿಬಿರವು ಸಹಜೀವನ, ಶಿಸ್ತು, ಸಮಾಜಜ್ಞಾನ ಮತ್ತು ಕರ್ತವ್ಯಬೋಧನೆ ನೀಡುವ ಜೀವನಪಾಠವಾಗಿದೆ, ಶಿಬಿರಕ್ಕೆ ಗ್ರಾಮ ಪಂಚಾಯತಿ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಗ್ರಾ.ಪಂ ಉಪಾಧ್ಯಕ್ಷ ನರೇಂದ್ರ ಬಾಬು ಮಾತನಾಡಿ “ಎನ್ಎಸ್ಎಸ್ ಶಿಬಿರ ಒಂದು ಬಗೆಗಿನ ತಪ್ಪು ಕಲ್ಪನೆಯಿದೆ, ಅಲ್ಲಿ ಮಕ್ಕಳಿಗೆ ಕೇವಲ ಕೆಲಸ ಮಾಡಿಸುತ್ತಾರೆ ಎಂಬ ಅಭಿಪ್ರಾಯ ಬೇಡ,ಇಲ್ಲಿ ವಿದ್ಯಾರ್ಥಿಗಳು ಪುಸ್ತಕದಲ್ಲಿಲ್ಲದ ಅನೇಕ ಮೌಲ್ಯ ಪಾಠಗಳನ್ನು ಅನುಭವದ ಮೂಲಕ ಕಲಿಯುತ್ತಾರೆ, ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ನೇ. ರಂ. ನಾಗರಾಜು, ವಿದ್ಯಾರ್ಥಿಗಳು ಮೊಬೈಲ್‌ ದೂರವಿಟ್ಟು ಮನುಷ್ಯ-ಸಂಗಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಸಮೂಹದಲ್ಲಿ ಬದುಕುವ ಗುಣ,ಸೋದರತ್ವ ಮತ್ತು ಒಟ್ಟಾಗಿ ಕೆಲಸ ಮಾಡುವ ಶಕ್ತಿ ಎನ್ಎಸ್ಎಸ್ ಶಿಬಿರದಲ್ಲಿ ಬೆಳೆಸಿಕೊಳ್ಳಬಹುದಾದ ಮಹತ್ವದ ಗುಣಗಳು ಎಂದರು. ಶಿಬಿರದ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಂ.ಪಿ. ವಿಜಯಶಂಕರ್, ಉಪನ್ಯಾಸಕ ಡಾ. ಸುಗ್ಗಯ್ಯ, ನಿವೃತ್ತ ಪಶುವೈದ್ಯಾಧಿಕಾರಿ ಡಾ. ರಾಮಚಂದ್ರಪ್ಪ, ಉದ್ಯಮಿ ಕೈ.ಗಾ. ನಾಗರಾಜು ಸೇರಿದಂತೆ ಹಲವು ಗಣ್ಯರು ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ಮುಖ್ಯ ಅತಿಥಿಗಳಾಗಿ ವಡ್ಡಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಜ್ ಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಎಂ. ರುದ್ರೇಶ್, ಮುಖಂಡ ವೀರಕ್ಯಾತರಾಯ, ಶಿಬಿರಾಧಿಕಾರಿ ನಂಜುಂಡಪ್ಪ,ಉಪನ್ಯಾಸಕರಾದ ಗಿರೀಶ್, ಜ್ಯೋತಿಬಾಯಿ ಹಾಗೂ ಸ್ಥಳೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.( ಚಿತ್ರ ಇದೆ ಬಳಸಿ ) ಚಿತ್ರ : ಎನ್ ಎಸ್ ಎಸ್ ಶಿಬಿರ ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ರಕ್ಷಿತಾ, ಕಾಲೇಜು ಪ್ರಾಂಶುಪಾಲ ನಾಗರಾಜು, ಸೇರಿದಂತೆ ಇತರರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+