ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೊರಟಗೆರೆ: ವಿದ್ಯಾರ್ಥಿ ಜೀವನದ ಅತ್ಯುತ್ತಮ ಪಾಠ ಎನ್ಎಸ್ಎಸ್ ಶಿಬಿರ — ರಕ್ಷಿತಾ ವೀರಕ್ಯಾತರಾಯ
ವರದಿಗಾರರು : ಮುತ್ತುರಾಜ್ | ಸ್ಥಳ : ಕೊರಟಗೆರೆ | ದಿನಾಂಕ : 25-11-2025

ಕೊರಟಗೆರೆ: ವಿದ್ಯಾರ್ಥಿ ಜೀವನದ ಅತ್ಯುತ್ತಮ ಪಾಠ ಎನ್ಎಸ್ಎಸ್ ಶಿಬಿರ — ರಕ್ಷಿತಾ ವೀರಕ್ಯಾತರಾಯ

ಕೊರಟಗೆರೆ: “ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಒಮ್ಮೆ ಎನ್ಎಸ್ಎಸ್ ಶಿಬಿರಕ್ಕೆ ಹಾಜರಾಗಲೇಬೇಕು. ಇದು ಪಠ್ಯ ಪುಸ್ತಕದ ಜ್ಞಾನಕ್ಕಿಂತಲೂ ಜೀವನ ಮೌಲ್ಯಗಳನ್ನು ಕಲಿಸುವ ಅನನ್ಯ ಪಾಠಶಾಲೆ ಎಂದು ವಡ್ಡಗೆರೆ ಗ್ರಾ.ಪಂ ಅಧ್ಯಕ್ಷೆ ರಕ್ಷಿತಾ ವೀರಕ್ಯಾತರಾಯ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ವತಿಯಿಂದ ವಡ್ಡಗೆರೆ ಗ್ರಾಮದಲ್ಲಿ ಆಯೋಜಿಸಲಾದ 7 ದಿನಗಳ ಎನ್ಎಸ್ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು

ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮತ್ತು ಸಮಾಜ ಪರಿವರ್ತನೆಗೆ ಪಣತೊಟ್ಟು ಮುಂದಾಗಬೇಕೆಂದು ಕರೆ ನೀಡಿದರು. ಶಿಬಿರವು ಸಹಜೀವನ, ಶಿಸ್ತು, ಸಮಾಜಜ್ಞಾನ ಮತ್ತು ಕರ್ತವ್ಯಬೋಧನೆ ನೀಡುವ ಜೀವನಪಾಠವಾಗಿದೆ, ಶಿಬಿರಕ್ಕೆ ಗ್ರಾಮ ಪಂಚಾಯತಿ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಗ್ರಾ.ಪಂ ಉಪಾಧ್ಯಕ್ಷ ನರೇಂದ್ರ ಬಾಬು ಮಾತನಾಡಿ “ಎನ್ಎಸ್ಎಸ್ ಶಿಬಿರ ಒಂದು ಬಗೆಗಿನ ತಪ್ಪು ಕಲ್ಪನೆಯಿದೆ, ಅಲ್ಲಿ ಮಕ್ಕಳಿಗೆ ಕೇವಲ ಕೆಲಸ ಮಾಡಿಸುತ್ತಾರೆ ಎಂಬ ಅಭಿಪ್ರಾಯ ಬೇಡ,ಇಲ್ಲಿ ವಿದ್ಯಾರ್ಥಿಗಳು ಪುಸ್ತಕದಲ್ಲಿಲ್ಲದ ಅನೇಕ ಮೌಲ್ಯ ಪಾಠಗಳನ್ನು ಅನುಭವದ ಮೂಲಕ ಕಲಿಯುತ್ತಾರೆ, ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ನೇ. ರಂ. ನಾಗರಾಜು, ವಿದ್ಯಾರ್ಥಿಗಳು ಮೊಬೈಲ್‌ ದೂರವಿಟ್ಟು ಮನುಷ್ಯ-ಸಂಗಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಸಮೂಹದಲ್ಲಿ ಬದುಕುವ ಗುಣ,ಸೋದರತ್ವ ಮತ್ತು ಒಟ್ಟಾಗಿ ಕೆಲಸ ಮಾಡುವ ಶಕ್ತಿ ಎನ್ಎಸ್ಎಸ್ ಶಿಬಿರದಲ್ಲಿ ಬೆಳೆಸಿಕೊಳ್ಳಬಹುದಾದ ಮಹತ್ವದ ಗುಣಗಳು ಎಂದರು. ಶಿಬಿರದ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಂ.ಪಿ. ವಿಜಯಶಂಕರ್, ಉಪನ್ಯಾಸಕ ಡಾ. ಸುಗ್ಗಯ್ಯ, ನಿವೃತ್ತ ಪಶುವೈದ್ಯಾಧಿಕಾರಿ ಡಾ. ರಾಮಚಂದ್ರಪ್ಪ, ಉದ್ಯಮಿ ಕೈ.ಗಾ. ನಾಗರಾಜು ಸೇರಿದಂತೆ ಹಲವು ಗಣ್ಯರು ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ಮುಖ್ಯ ಅತಿಥಿಗಳಾಗಿ ವಡ್ಡಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಜ್ ಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಎಂ. ರುದ್ರೇಶ್, ಮುಖಂಡ ವೀರಕ್ಯಾತರಾಯ, ಶಿಬಿರಾಧಿಕಾರಿ ನಂಜುಂಡಪ್ಪ,ಉಪನ್ಯಾಸಕರಾದ ಗಿರೀಶ್, ಜ್ಯೋತಿಬಾಯಿ ಹಾಗೂ ಸ್ಥಳೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.( ಚಿತ್ರ ಇದೆ ಬಳಸಿ ) ಚಿತ್ರ : ಎನ್ ಎಸ್ ಎಸ್ ಶಿಬಿರ ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ರಕ್ಷಿತಾ, ಕಾಲೇಜು ಪ್ರಾಂಶುಪಾಲ ನಾಗರಾಜು, ಸೇರಿದಂತೆ ಇತರರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+