ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಎಂಎಲ್ಸಿ ಡಿ.ಟಿ. ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಿ: ಹಾಸನ ಜಿಲ್ಲಾ ಯಾದವ ಸಂಘದ ಆಗ್ರಹ
ವರದಿಗಾರರು : ಕೆ ಜೆ ಸುರೇಶ | ಸ್ಥಳ : ಹಾಸನ | ದಿನಾಂಕ : 01-12-2025

ಎಂಎಲ್ಸಿ ಡಿ.ಟಿ. ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಿ: ಹಾಸನ ಜಿಲ್ಲಾ ಯಾದವ ಸಂಘದ ಆಗ್ರಹ

ರಾಜ್ಯ ಗೊಲ್ಲ (ಯಾದವ) ಸಮುದಾಯಕ್ಕೆ ರಾಜಕೀಯ ಪ್ರತಿನಿಧಿತ್ವ ಹೆಚ್ಚಿಸಬೇಕೆಂದು ಒತ್ತಾಯಿಸಿ, ಹಾಸನ ಜಿಲ್ಲಾ ಗೊಲ್ಲ (ಯಾದವ) ಸಂಘವು ರಾಜ್ಯಾಧ್ಯಕ್ಷ ಹಾಗೂ ಎಂಎಲ್ಸಿ ಡಿ.ಟಿ. ಶ್ರೀನಿವಾಸ್ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಸರ್ಕಾರವನ್ನು ಮನವಿ ಮಾಡಿದೆ. ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಹೊನ್ನೇಗೌಡ ಮಾತನಾಡಿ, ರಾಜ್ಯದಲ್ಲಿ ಯಾದವ ಸಮುದಾಯದ ಜನಸಂಖ್ಯೆ 19 ಲಕ್ಷಕ್ಕೂ ಅಧಿಕವಾಗಿದ್ದರೂ ರಾಜಕೀಯವಾಗಿ ಸಮರ್ಪಕ ಪ್ರತಿನಿಧಿತ್ವ ದೊರಕಿಲ್ಲ ಎಂದು ವಿಷಾದಿಸಿದರು.

ಯಾದವ ಸಮುದಾಯದ ದೀಕ್ಷಿತ ನಾಯಕ ದಿ.ಎ. ಕೃಷ್ಣಪ್ಪ ಅವರ ನಂತರ ರಾಜ್ಯ ಸಂಘಟನೆಯ ನೇತೃತ್ವವನ್ನು ಡಿ.ಟಿ. ಶ್ರೀನಿವಾಸ್ ಬಲಿಷ್ಠವಾಗಿ ಮುಂದುವರಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ತುಮಕೂರು, ಚಿತ್ರದುರ್ಗ, ಚಿಕ್ಕೋಡಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಾಜ್ಯ ಗೊಲ್ಲ ಸಮಾವೇಶಗಳು ಯಶಸ್ವಿಯಾಗಿ ನಡೆಯಿವೆ,” ಎಂದು ಅವರು ಹೇಳಿದರು. 2024ರ ಆಗ್ನೇಯ ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಚುನಾವಣೆಯಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ಗೆ ಗೆಲುವು ತಂದುಕೊಟ್ಟವರು ಡಿ.ಟಿ. ಶ್ರೀನಿವಾಸ್ ಎಂಬುದನ್ನು ಅವರು ನೆನಪಿಸಿದರು. “ತಮ್ಮ ಚಾಣಾಕ್ಷ ತಂತ್ರಗಳು, ವಿಶಾಲ ಸಂಘಟನೆ ಮತ್ತು ಚುನಾವಣಾ ಅನುಭವವು ಅವರನ್ನು ಸಚಿವಸ್ಥಾನಕ್ಕೆ ಅರ್ಹರನ್ನಾಗಿ ಮಾಡುತ್ತದೆ,” ಎಂದು ಹೊನ್ನೇಗೌಡ ಅಭಿಪ್ರಾಯ ಪಟ್ಟರು.

ಡಾಕ್ಟರೇಟ್ ಸೇರಿದಂತೆ ಅನೇಕ ಪದವಿಗಳನ್ನು ಪಡೆದಿರುವ ಶ್ರೀನಿವಾಸರು ರಾಜ್ಯದ ಹಿಂದುಳಿದ ಪ್ರವರ್ಗ–1ರ ಜಾತಿಗಳ ಒಕ್ಕೂಟದ ಅಧ್ಯಕ್ಷರಾಗಿ 95ಕ್ಕೂ ಹೆಚ್ಚು ಅತಿಹಿಂದುಳಿದ ಸಮಾಜಗಳನ್ನು ಸಂಘಟಿಸಲು ಶ್ರಮಿಸುತ್ತಿದ್ದಾರೆ. ಇಂತಹ ವ್ಯಕ್ತಿಯನ್ನು ಕಾಂಗ್ರೆಸ್ ಸರ್ಕಾರ ಮಾನ್ಯತೆಯನ್ನು ನೀಡಿ ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದರು. “ಗೊಲ್ಲ ಸಮುದಾಯವನ್ನು ಹಲವು ವರ್ಷಗಳಿಂದ ರಾಜಕೀಯವಾಗಿ ಕಡೆಗಣಿಸಲಾಗಿದೆ. ಆದರೆ ಈ ಬಾರಿ ಸರ್ಕಾರವು ನ್ಯಾಯ ಮಾಡಬೇಕೆಂಬ ಆಶೆಯಿದೆ,” ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ನೇತೃತ್ವದ ಕೃಷ್ಣಪ್ಪ, ಗೋವಿಂದರಾಜು, ಕೇಶವೇಗೌಡ, ನರಸಿಂಹಮೂರ್ತಿ ಹಾಗೂ ಇತರರು ಹಾಜರಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+