ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

“ಸದೃಢ ಆರೋಗ್ಯಕ್ಕೆ ಜೀವನಶೈಲಿ ಬದಲಾವಣೆ ಅಗತ್ಯ” — ಬಳ್ಳಾರಿ ಪಾಲಿಕೆ ಆಯುಕ್ತ ಮಂಜುನಾಥ
ವರದಿಗಾರರು : ಮಹೇಶ್ ಕುಮಾರ್ | ಸ್ಥಳ : ಬಳ್ಳಾರಿ | ದಿನಾಂಕ : 18-11-2025

“ಸದೃಢ ಆರೋಗ್ಯಕ್ಕೆ ಜೀವನಶೈಲಿ ಬದಲಾವಣೆ ಅಗತ್ಯ” — ಬಳ್ಳಾರಿ ಪಾಲಿಕೆ ಆಯುಕ್ತ ಮಂಜುನಾಥ

ಬಳ್ಳಾರಿ: “ಮಧುಮೇಹ ನಿಯಂತ್ರಣಕ್ಕೆ ಜೀವನಶೈಲಿ ಬದಲಾವಣೆ ಅತ್ಯವಶ್ಯ,” ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಹೇಳಿದರು. ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರ ನಡೆದ ಜನಜಾಗೃತಿ ವಾಕ್ ಮ್ಯಾರಥಾನ್‌ಗೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.

ನಿತ್ಯ ವ್ಯಾಯಾಮದ ಕೊರತೆ ಮತ್ತು ಅಸಮತೋಲನ ಆಹಾರ ಸೇವನೆಯಿಂದ ಮಧುಮೇಹ ಪ್ರಕರಣಗಳು ಹೆಚ್ಚುತ್ತಿದ್ದು, ಮಕ್ಕಳಿಂದ ಹಿರಿಯರವರೆಗೆ ಎಲ್ಲರೂ ಜಾಗೃತರಾಗಬೇಕಿದೆ ಎಂದು ಸಲಹೆ ನೀಡಿದರು. “ಮಧುಮೇಹ ಬಂದ ಮೇಲೆ ಚಿಕಿತ್ಸೆಗಿಂತ ಬರದಂತೆ ತಡೆಯುವುದು ಉತ್ತಮ,” ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ಜಿಲ್ಲೆಯ 20% ಕ್ಕೂ ಹೆಚ್ಚು ಜನರು ಮಧುಮೇಹ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ನೀಡಿದರು. ರಾಜ್ಯ ಸರ್ಕಾರದ ಗೃಹ-ಆರೋಗ್ಯ ಯೋಜನೆಯಡಿ ಮನೆಮನೆಗೆ ತೆರಳಿ ತಪಾಸಣೆ ಹಾಗೂ ಉಚಿತ ಔಷಧೋಪಚಾರ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್. ಬಸರೆಡ್ಡಿ ಅವರು, “ಪ್ರತಿ ಐದು ಜನರಲ್ಲಿ ಒಬ್ಬರಿಗೆ ಮಧುಮೇಹ ಇರುವ ಕಾಲ ಇದು. ಸರಿಯಾದ ಡಯಟ್ ಮತ್ತು ವ್ಯಾಯಾಮದ ಮೂಲಕ ನಿಯಂತ್ರಣ ಸಾಧ್ಯ,” ಎಂದು ಹೇಳಿದರು.

ಜಿಲ್ಲಾ ಅಸಾಂಕ್ರಾಮಿಕ ರೋಗಗಳಾಧಿಕಾರಿ ಡಾ. ವೀರೇಂದ್ರ ಕುಮಾರ್ ಕೆ.ಜಿ ಅವರು ಸಮತೋಲನ ಆಹಾರ, ಉತ್ತಮ ನಿದ್ರೆ ಮತ್ತು ತೂಕ ನಿಯಂತ್ರಣ ಮಧುಮೇಹ ತಡೆಗೆ ಮುಖ್ಯ ಅಂಶವೆಂದರು.

ಜಾಗೃತಿ ಜಾಥಾ ಮಾರ್ಗ: ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ → ಸಂಗಾ ವೃತ್ತ → ಗಡಿಗಿ ಚೆನ್ನಪ್ಪ ವೃತ್ತ → ಜಿಲ್ಲಾಧಿಕಾರಿಗಳ ಕಚೇರಿ → ಹೆಚ್.ಆರ್. ಗವಿಯಪ್ಪ ವೃತ್ತ → ಮತ್ತೆ ಗಡಿಗಿ ಚೆನ್ನಪ್ಪ ವೃತ್ತ → ಆರೋಗ್ಯಾಧಿಕಾರಿಗಳ ಕಚೇರಿ.

ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ವೈದ್ಯಾಧಿಕಾರಿಗಳು ಹಾಗೂ ಬಳ್ಳಾರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+